Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕದ ಪ್ರತಿಭಟನಾ ಸಭೆ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕದ ಪ್ರತಿಭಟನಾ ಸಭೆ

    curiouslabsBy curiouslabs3 January 2024 ಬ್ರೇಕಿಂಗ್ ನ್ಯೂಸ್ No Comments3 Mins Read
    Share
    Facebook WhatsApp
    Share on:

    ಮಂಗಳೂರು: ರಾಜ್ಯ ಆಯುರ್ವೇದ ವೈದ್ಯರುಗಳ ಬಹುದಿನಗಳ ಬೇಡಿಕೆಯಾದ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಲು ಕಾನೂನಿನ್ವಯ ರಾಜ್ಯದಲ್ಲೂ ಕೂಡ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿ ಇಂದು (03-01-2024) ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ಸ್ಥಾಪಕ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧ ಎದುರು ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ನಡೆಯಿತು.

    ಆಯುರ್ವೇದ ಚಿಕಿತ್ಸೆಯು ಅತ್ಯಂತ ಪುರಾತನ ಆರೋಗ್ಯ ಸಂರಕ್ಷಣೆಯ ವ್ಯವಸ್ಥೆಯಾಗಿದ್ದು ಅದು ಔಷಧ ಮತ್ತು ತತ್ವಶಾಸ್ತ್ರ ಎರಡರ ಸಂಮಿಶ್ರಣವಾಗಿದೆ. ಇದು ಮಾನವನ ದೈಹಿಕ, ಮಾನಸಿಕ ಮತ್ತು
    ಆಧ್ಯಾತ್ಮಿಕ ಬೆಳವಣಿಗೆಯತ್ತಾ ಮುನ್ನಡೆಸುತ್ತದೆ. ಕೊರೋನಾ ಸಂದರ್ಭದಲ್ಲಿ ನಮ್ಮ ಜೀವ ಪಣಕ್ಕಿಟ್ಟು
    ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರಿಗೆ ಹೊಸ ಜೀವನ ಕಲ್ಪಿಸಿದ್ದಲ್ಲದೆ, ಗ್ರಾಮೀಣ ಭಾಗದ ಜನರ
    ಜೀವನಾಡಿಯಾಗಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ಹೇಳಲು ಹೆಮ್ಮೆ ಎನಿಸುತ್ತಿದೆ.

    ನಮ್ಮ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಬಾರದು ಎನ್ನುವ ರಾಜ್ಯ ಸರ್ಕಾರದ ಕಾನೂನು ನಮ್ಮ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ನಮ್ಮ ಭಾರತ ದೇಶದ ರಾಜ್ಯಗಳಾದಂತ ಮಧ್ಯಪ್ರದೇಶ, ರಾಜಾಸ್ತಾನ, ಮಹಾರಾಷ್ಟ್ರ, ಬಿಹಾರ್, ಉತ್ತರಾಖಂಡ, ತಮಿಳುನಾಡು, ಉತ್ತರಪ್ರದೇಶ ಹಾಗೇ ಹಲವು ರಾಜ್ಯಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಆಯುರ್ವೇದ ವೈದ್ಯರುಗಳಿಗೆ (B.A.M.S) ಅವಶ್ಯಕ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ನೀಡಿರುತ್ತದೆ.

    ಆಯುರ್ವೇದ ವೈದ್ಯರು (B.A.M.S) ಪದವಿಯನ್ನು ಐದುವರೇ ವರ್ಷ ಕಲಿತು, ಸರ್ಕಾರ ಮಾನ್ಯತೆಯುಳ್ಳ ರಾಜೀವ್‌ಗಾಂಧಿ ಯುನಿರ್ವಸಿಟಿ ಹಾಗೂ KAUP Boardನಲ್ಲಿ ಪದವಿಯನ್ನು ಪಡೆದಿರುತ್ತಾರೆ. (B.A.M.S) ಕೋರ್ಸ್‌ನಲ್ಲಿ ಆಯುರ್ವೇದದ ಜೊತೆಗೆ ಮಾಡರ್ನ್ ಮೆಡಿಕಲ್ ಸೈನ್ಸ್‌ನ್ನು ಕಲಿಸಿರುತ್ತಾರೆ. 6 ತಿಂಗಳು ಕಡ್ಡಾಯ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಇಂಟರ್ನ್‌ಶಿಪ್ ಮತ್ತು 6 ತಿಂಗಳು ಆಯುರ್ವೇದ ಚಿಕಿತ್ಸೆ ಪದ್ಧತಿಯಲ್ಲಿ ಇಂಟರ್ನ್‌ಶಿಪ್ ಮಾಡಿರುತ್ತೇವೆ. 2016ರಲ್ಲಿ ಮಾನ್ಯ ರಮೇಶ್ ಕುಮಾರ್ ಆರೋಗ್ಯ ಸಚಿವರಾಗಿರುವಾಗ ಸರಕಾರಿ ಪ್ರಾಥಮಿಕ ಕೇಂದ್ರಗಳಲ್ಲಿ ಆರ್ಯುವೇದ ವೈದ್ಯರಿಗೆ ಅಲೋಪತಿ ಔಷಧ ನೀಡಲು ಪರವಾನಿಗೆ ಸಿಕ್ಕಿರುತ್ತದೆ.

    ರಾಜ್ಯದಲ್ಲಿ BAMS ವೈದ್ಯರಿಗೆ K.P.M.EA ಕಾಯ್ದೆ ಅಡಿಯಲ್ಲಿ ಪರಿವೀಕ್ಷಣ ಹೆಸರಿನಲ್ಲಿ ಆಗುತ್ತಿರುವ ಕಿರುಕುಳ ನೀಡುತ್ತಿರುವುದು ಖಂಡನೀಯವಾಗಿದೆ. ಮತ್ತು ಕಾನೂನಿನಲ್ಲಿ ಇರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಆಯುಷ್ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು ಈಗಾಗಲೇ ಮಹಾರಾಷ್ಟ್ರ ಸೇರಿದಂತೆ ಇತರ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾನೂನಿನಂತೆ ತಿದ್ದುಪಡಿಯನ್ನು ಡ್ರಗ್ಸ್ ಆಂಡ್ ಕಾಸ್ಕೆಟಿಕ್ ಆಕ್ಟ್ (Drugs & cosmatics act 1940 Rule 2EE (iii) ರನ್ವಯ ನಮ್ಮ ರಾಜ್ಯದಲ್ಲಿಯೂ ಕೂಡ ತಿದ್ದುಪಡಿ ಮಾಡಿ ಜಾರಿಗೆ ತರಬೇಕು ಹಾಗೂ ಕರ್ನಾಟಕ ರಾಜ್ಯ ಆಯುರ್ವೇದ ಯುನಾನಿ ಬೋರ್ಡ್ ಮತ್ತು ಹೋಮಿಯೋಪತಿ ಬೋರ್ಡ್‌ಗಳ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ಮಾನ್ಯ ಮುಖ್ಯ ಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

    ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಆಯುರ್ವೇದ ವೈದ್ಯರ ಸಂಘ ಹಾಗೂ ಇತರ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿಭಟನೆ ಹಾಗೂ ಹಕ್ಕೊತ್ತಾಯ ಸಭೆಗಳು ನಡೆಯಲಿವೆ.
    ಬರುವ ಮೇ ತಿಂಗಳಲ್ಲಿ ವೈದ್ಯರ ಹಲವಾರು ಬೇಡಿಕೆಗಳನ್ನು ಸರಕಾರದ ಗಮನಸೆಳೆಯುವ ದೃಷ್ಟಿಯಿಂದ ಬೃಹತ್ ವೈದ್ಯರ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು. ಆ ಸಮಾವೇಶ ದಲ್ಲಿ ಸಾವಿರಾರು ವೈದ್ಯರು ಭಾಗವಹಿಸಲಿರುವರು. ಆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಂತ್ರಿಗಳು, ಶಾಸಕರು,ಸಂಸದರು ,ಸಮಾಜದ ಗಣ್ಯ ವ್ಯಕ್ತಿಗಳ ಕೂಡುವಿಕೆಗೆ ಯೋಜನೆ ರೂಪಿಸಲಾಗಿದೆ. ಸರ್ವ ಜನರ ಸಹಕಾರದಿಂದ ಮಾತ್ರ ಸಾದ್ಯವಾಗಲಿದೆ.ಎಂದು ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಮತ್ತು ಉಡುಪಿ ಜಿಲ್ಲಾದ್ಯಕ್ಷ ಡಾ. ರವೀಂದ್ರ ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಪ್ರಾಸ್ತಾವಿಕ ಭಾಷಣ ಮಾಡಿದರು , ವೈದ್ಯರ ಘಟಕದ ಉಪಾಧ್ಯಕ್ಷರಾದ ಡಾ. ಎನ್‌ .ಟಿ ಅಂಚನ್, ವೈದ್ಯರ ಘಟಕ ಮುಖಂಡರುಗಳಾದ ಡಾ.ಜಗದೀಶ್ ಶೆಟ್ಟಿ, ಡಾ.ಸುಭಾಷ್ ರೈ ಯವರು ಆಯುರ್ವೇದ ವೈದ್ಯರ ಸಂಕಷ್ಟಗಳ ಬಗ್ಗೆ ಮಾತನಾಡಿದರು.


    ಡಾ.ಪ್ರಜಿತ್ ನಂಬಿಯಾರ್, ಡಾ. ಸಂದೀಪ್ ಸನಿಲ್, ಡಾ. ಜಯ ಮೋಹನ್ ನಂಬಿಯಾರ್, ಡಾ. ಪ್ರಕಾಶ್ ಪೈ, ಡಾ. ಚಂದ್ರಶೇಖರ್ ಶೆಟ್ಟಿ, ಡಾ. ಕೃಷ್ಣರಾವ್, ಗಜಾನನ್ ಹೆಗಡೆ, ಡಾ. ವಿಶ್ವನಾಥ್ ಹೆಗ್ಡೆ , ಡಾ. ಅರುಣ್ ಶೆಟ್ಟಿ, ಡಾ. ವರುಣ್ ಪಿ ನಂಬಿಯಾರ್, ಡಾ. ಸಂದೀಪ್ ಶೆಟ್ಟಿ, ಡಾ. ಶ್ರೇಯಸ್ ಕುಮಾರ್, ಡಾ. ಸತೀಶ್ ರಾವ್, ಡಾ ಕೀರ್ತಿ ,ಡಾ. ಶ್ರೀಧರ್ ವರ್ಣ , ಡಾ ಜೆ.ಕೆ. ಶೆಟ್ಟಿ , ಡಾ. ಜಬೀರ್, ಡಾ. ಕಾರ್ತಿಕೇಯ ಪ್ರಾಸಾ , ಡಾ .ಮತೀಮ್ ಹುಸೇನ್ , ಡಾ.ಎಸ್. ಎನ್ ,ಹೊಳ್ಳ. ಡಾ. ಗಣೇಶ್ ಕುಮಾರ್ ,ಡಾ.ಸುಮಂಗಳ , ಡಾ. ಪೌರವ್ ಶೆಟ್ಟಿ , ಡಾ. ಸುದರ್ಶನ್ ವೈದ್ಯ ,ಡಾ.ಹ್ಯಾರಿಸ್ , ಡಾ. ಹರಿಪ್ರಸಾದ್ ಶೆಟ್ಟಿ , ಡಾ. ಅಭಿನವ ಶೆಟ್ಟಿ , ಡಾ ಪ್ರವೀಣ್ ಶೆಟ್ಟಿ , ಉಡುಪಿ ಜಿಲ್ಲಾ ವೀಕ್ಷಕರು ಫ್ರಾಂಕಿ ಡಿಸೋಜ ಮುಖಂಡರುಗಳಾದ ಜ್ಯೋತಿಕಾ ಜೈನ್, ಸಿ.ಎಸ್ . ರಾಧಿಕಾ , ನಾಗಲಕ್ಷ್ಮಿ , ಹರೀಶ್ ಶೆಟ್ಟಿ, ಅಬ್ದುಲ್ ಅಜೀಜ್, ಆಶಿಶ್ ಅಂಚನ್, ಯಶು ಪಕ್ಕಳ, ಗೋಲ್ಡನ್ ಪಾರುಖ್, ಶಾರದಾ ಶೆಟ್ಟಿ, ಗಂಗಾಧರ ಅತ್ತಾವರ , ಕಾಮಾಕ್ಷಿ , ಗೈಟನ್ , ಸುರೇಂದ್ರ, ಗುಲಾಬಿ , ಗುಣವತಿ , ಮಹೇಶ್ , ಪುನೀತ್ ಮತ್ತಿತರ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Share on:

    Keep Reading

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ

    21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.